ರಾಜ್ಯ

ಬೆಳ್ಳುಳ್ಳಿ ಬೆಲೆ ಏರಿಕೆ : ಕೆಜಿಗೆ ೬೦೦ ರೂ !

ಬೆಂಗಳೂರು :  ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ.

ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ದೆಹಲಿ, ಲಕ್ನೋ, ಭೋಪಾಲ್, ಪಾಟ್ನಾ ಸೇರಿದಂತೆ ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿದೆ. 15 ದಿನಗಳ ಹಿಂದೆ ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂಪಾಯಿ ಇತ್ತು.

ಹೊಸ ಬೆಳೆ ಬರಲು ವಿಳಂಬ ಹಾಗೂ ಇಳುವರಿ ಕುಂಠಿತವಾಗಿರುವ ಕಾರಣ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಬದಲಾಗುತ್ತಿರುವ ಹವಾಮಾನವು ಬೆಳ್ಳುಳ್ಳಿ ಬೆಳೆಗಳಿಗೆ ಹಾನಿಯನ್ನುಂಟು ಮಾಡಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಬೆಳೆ ಸಾಕಷ್ಟು ನಷ್ಟವಾಗಿವೆ. ಬೆಳೆ ಹಾನಿಯಿಂದಾಗಿ ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳ್ಳುಳ್ಳಿ ಪೂರೈಕೆಯಾಗುತ್ತಿಲ್ಲ.

ದಾಸ್ತಾನು ಕೊರತೆ ಬೆಲೆ ಏರಿಕೆಗೆ ಪ್ರಮುಖ ಕಾರಣ. ಜನರು ಬೆಲೆ ಏರಿಕೆಗೆ ಪ್ರಾಫಿಟ್ ಬುಕ್ಕಿಂಗ್ ಕಾರಣ ಎಂದೂ ಹೇಳ್ತಿದ್ದಾರೆ. ಬೆಳೆ ವಿಫಲವಾದ ಕಾರಣ ಎರಡನೇ ಬೆಳೆ ನಾಟಿ ಮಾಡಲು ಸಮಯ ಹಿಡಿಯಿತು. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗ್ತಿದೆ.

ಸಗಟು ವ್ಯಾಪಾರಿಗಳ ಪ್ರಕಾರ ಹೊಸ ಬೆಳೆ ಬಂದ ಮೇಲೆ ಬೆಲೆ ಕಡಿಮೆಯಾಗಲಿದೆ. ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಳ್ಳುಳ್ಳಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಳ್ಳುಳ್ಳಿ ಅಗ್ಗವಾಗುವ ಸಾಧ್ಯತೆ ಇದೆ.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

11 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago