ಬೆಂಗಳೂರು : ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ.
ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ದೆಹಲಿ, ಲಕ್ನೋ, ಭೋಪಾಲ್, ಪಾಟ್ನಾ ಸೇರಿದಂತೆ ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿದೆ. 15 ದಿನಗಳ ಹಿಂದೆ ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂಪಾಯಿ ಇತ್ತು.
ಹೊಸ ಬೆಳೆ ಬರಲು ವಿಳಂಬ ಹಾಗೂ ಇಳುವರಿ ಕುಂಠಿತವಾಗಿರುವ ಕಾರಣ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಬದಲಾಗುತ್ತಿರುವ ಹವಾಮಾನವು ಬೆಳ್ಳುಳ್ಳಿ ಬೆಳೆಗಳಿಗೆ ಹಾನಿಯನ್ನುಂಟು ಮಾಡಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಬೆಳೆ ಸಾಕಷ್ಟು ನಷ್ಟವಾಗಿವೆ. ಬೆಳೆ ಹಾನಿಯಿಂದಾಗಿ ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳ್ಳುಳ್ಳಿ ಪೂರೈಕೆಯಾಗುತ್ತಿಲ್ಲ.
ದಾಸ್ತಾನು ಕೊರತೆ ಬೆಲೆ ಏರಿಕೆಗೆ ಪ್ರಮುಖ ಕಾರಣ. ಜನರು ಬೆಲೆ ಏರಿಕೆಗೆ ಪ್ರಾಫಿಟ್ ಬುಕ್ಕಿಂಗ್ ಕಾರಣ ಎಂದೂ ಹೇಳ್ತಿದ್ದಾರೆ. ಬೆಳೆ ವಿಫಲವಾದ ಕಾರಣ ಎರಡನೇ ಬೆಳೆ ನಾಟಿ ಮಾಡಲು ಸಮಯ ಹಿಡಿಯಿತು. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗ್ತಿದೆ.
ಸಗಟು ವ್ಯಾಪಾರಿಗಳ ಪ್ರಕಾರ ಹೊಸ ಬೆಳೆ ಬಂದ ಮೇಲೆ ಬೆಲೆ ಕಡಿಮೆಯಾಗಲಿದೆ. ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಳ್ಳುಳ್ಳಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಳ್ಳುಳ್ಳಿ ಅಗ್ಗವಾಗುವ ಸಾಧ್ಯತೆ ಇದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…