ಬೆಂಗಳೂರು : ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ.
ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ದೆಹಲಿ, ಲಕ್ನೋ, ಭೋಪಾಲ್, ಪಾಟ್ನಾ ಸೇರಿದಂತೆ ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿದೆ. 15 ದಿನಗಳ ಹಿಂದೆ ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂಪಾಯಿ ಇತ್ತು.
ಹೊಸ ಬೆಳೆ ಬರಲು ವಿಳಂಬ ಹಾಗೂ ಇಳುವರಿ ಕುಂಠಿತವಾಗಿರುವ ಕಾರಣ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಬದಲಾಗುತ್ತಿರುವ ಹವಾಮಾನವು ಬೆಳ್ಳುಳ್ಳಿ ಬೆಳೆಗಳಿಗೆ ಹಾನಿಯನ್ನುಂಟು ಮಾಡಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಬೆಳೆ ಸಾಕಷ್ಟು ನಷ್ಟವಾಗಿವೆ. ಬೆಳೆ ಹಾನಿಯಿಂದಾಗಿ ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳ್ಳುಳ್ಳಿ ಪೂರೈಕೆಯಾಗುತ್ತಿಲ್ಲ.
ದಾಸ್ತಾನು ಕೊರತೆ ಬೆಲೆ ಏರಿಕೆಗೆ ಪ್ರಮುಖ ಕಾರಣ. ಜನರು ಬೆಲೆ ಏರಿಕೆಗೆ ಪ್ರಾಫಿಟ್ ಬುಕ್ಕಿಂಗ್ ಕಾರಣ ಎಂದೂ ಹೇಳ್ತಿದ್ದಾರೆ. ಬೆಳೆ ವಿಫಲವಾದ ಕಾರಣ ಎರಡನೇ ಬೆಳೆ ನಾಟಿ ಮಾಡಲು ಸಮಯ ಹಿಡಿಯಿತು. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗ್ತಿದೆ.
ಸಗಟು ವ್ಯಾಪಾರಿಗಳ ಪ್ರಕಾರ ಹೊಸ ಬೆಳೆ ಬಂದ ಮೇಲೆ ಬೆಲೆ ಕಡಿಮೆಯಾಗಲಿದೆ. ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಳ್ಳುಳ್ಳಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಳ್ಳುಳ್ಳಿ ಅಗ್ಗವಾಗುವ ಸಾಧ್ಯತೆ ಇದೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…