ರಾಜ್ಯ

ಬೆಳ್ಳುಳ್ಳಿ ಬೆಲೆ ಏರಿಕೆ : ಕೆಜಿಗೆ ೬೦೦ ರೂ !

ಬೆಂಗಳೂರು :  ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ.

ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ದೆಹಲಿ, ಲಕ್ನೋ, ಭೋಪಾಲ್, ಪಾಟ್ನಾ ಸೇರಿದಂತೆ ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿದೆ. 15 ದಿನಗಳ ಹಿಂದೆ ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂಪಾಯಿ ಇತ್ತು.

ಹೊಸ ಬೆಳೆ ಬರಲು ವಿಳಂಬ ಹಾಗೂ ಇಳುವರಿ ಕುಂಠಿತವಾಗಿರುವ ಕಾರಣ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಬದಲಾಗುತ್ತಿರುವ ಹವಾಮಾನವು ಬೆಳ್ಳುಳ್ಳಿ ಬೆಳೆಗಳಿಗೆ ಹಾನಿಯನ್ನುಂಟು ಮಾಡಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಬೆಳೆ ಸಾಕಷ್ಟು ನಷ್ಟವಾಗಿವೆ. ಬೆಳೆ ಹಾನಿಯಿಂದಾಗಿ ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳ್ಳುಳ್ಳಿ ಪೂರೈಕೆಯಾಗುತ್ತಿಲ್ಲ.

ದಾಸ್ತಾನು ಕೊರತೆ ಬೆಲೆ ಏರಿಕೆಗೆ ಪ್ರಮುಖ ಕಾರಣ. ಜನರು ಬೆಲೆ ಏರಿಕೆಗೆ ಪ್ರಾಫಿಟ್ ಬುಕ್ಕಿಂಗ್ ಕಾರಣ ಎಂದೂ ಹೇಳ್ತಿದ್ದಾರೆ. ಬೆಳೆ ವಿಫಲವಾದ ಕಾರಣ ಎರಡನೇ ಬೆಳೆ ನಾಟಿ ಮಾಡಲು ಸಮಯ ಹಿಡಿಯಿತು. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗ್ತಿದೆ.

ಸಗಟು ವ್ಯಾಪಾರಿಗಳ ಪ್ರಕಾರ ಹೊಸ ಬೆಳೆ ಬಂದ ಮೇಲೆ ಬೆಲೆ ಕಡಿಮೆಯಾಗಲಿದೆ. ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಳ್ಳುಳ್ಳಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಳ್ಳುಳ್ಳಿ ಅಗ್ಗವಾಗುವ ಸಾಧ್ಯತೆ ಇದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago