ರಾಜ್ಯ

ಗೌರಿ ಹತ್ಯೆ ಪ್ರಕರಣ: 11ನೇ ಆರೋಪಿಗೆ ಜಾಮೀನು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಮೋಹನ್ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣವೇನು: 2017ರ ಸೆ.5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೌರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ., ಪರಶುರಾಮ್ ವಾಗೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ.

ಎಸ್‌ಐಟಿ 17 ಆರೋಪಿ ಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.ಇದೀಗ ಆತನಿಗೆ ಜಾಮೀನು ನೀಡಲಾಗಿದೆ.

andolanait

Recent Posts

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…

7 mins ago

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕಾರು ಬಾವಿಗೆ ಬಿದ್ದು ಒಂದೇ ಕುಟುಂಬದ 9 ಮಂದಿ ಸಾವು

ನಾಸಿಕ್:‌ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…

49 mins ago

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ ಪ್ರಕರಣ: ಆರೋಪಿ ವಿರುದ್ಧ ಕ್ರಮಕ್ಕೆ ಸೂಚನೆ ಎಂದ ಸಚಿವ ಪರಮೇಶ್ವರ್‌

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು,…

1 hour ago

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…

2 hours ago

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

2 hours ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

2 hours ago