ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ.
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಮೋಹನ್ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರಕರಣವೇನು: 2017ರ ಸೆ.5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೌರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ., ಪರಶುರಾಮ್ ವಾಗೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ.
ಎಸ್ಐಟಿ 17 ಆರೋಪಿ ಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.ಇದೀಗ ಆತನಿಗೆ ಜಾಮೀನು ನೀಡಲಾಗಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…