ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.
ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ
ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…