ರಾಜ್ಯ

ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್​ ಕುಮಾರ್​ ವಿಶ್ವಾಸ ವ್ಯಕ್ತಪಡಿಸಿದರು.

ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

47 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

3 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

4 hours ago