ರಾಜ್ಯ

ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್​ ಕುಮಾರ್​ ವಿಶ್ವಾಸ ವ್ಯಕ್ತಪಡಿಸಿದರು.

ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

14 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

20 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

38 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

1 hour ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

2 hours ago