ರಾಜ್ಯ

ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್​ ಕುಮಾರ್​ ವಿಶ್ವಾಸ ವ್ಯಕ್ತಪಡಿಸಿದರು.

ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

13 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago