ರಾಜ್ಯ

ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್​ ಕುಮಾರ್​ ವಿಶ್ವಾಸ ವ್ಯಕ್ತಪಡಿಸಿದರು.

ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago