ರಾಜ್ಯ

ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಂಜುನಾಥ ಭಂಡಾರಿ ಅವರಿಗೆ ನಾನು ಇನ್ಮುಂದೆ ಚುನಾವಣೆಯ ಸಮಸ್ಯೆಯನ್ನೇ ಕೂಡಲ್ಲ. ನನ್ನ ತಮ್ಮ ಮಧು ಇದ್ದಾನೆ. ಅವನನ್ನು ಬಿಡಬೇಡಿ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ನಾನು ಬೆಂಗಳೂರಿನಲ್ಲಿ ಇದ್ದಾಗ ನನಗೆ ಏನೇ ಕಷ್ಟ ಅಂತ ಬಂದ್ರು ಸಹ ನನ್ನ ಜೊತೆಯಲ್ಲಿ ನನ್ನ ತಮ್ಮ ಮಧು ಬಂಗಾರಪ್ಪ ಇದ್ದ. ಅವನಿಗೆ ಏನೇ ಕಷ್ಟ ಇದ್ರು ಸಹ ಅವನು ಯಾವಗಲೂ ನನ್ನ ಜೊತೆಗೆ ಇದ್ದಾನೆ ಎಂದು ಹೇಳಿದರು.

ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಸೌಮ್ಯ ರೆಡ್ಡಿ ಅವರಿಗೆ ತುಂಬ ಧೈರ್ಯ ಇದೆ. ಅವರು ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಮುಂದೆ ಕರೆದರೆ ನಾನು ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮಹಿಳೆಯರು ಯಾವತ್ತೂ ಅಬಲೆಯರಲ್ಲ, ಅವರಲ್ಲಿ ಧೈರ್ಯ, ಶಕ್ತಿ, ಸಾಮರ್ಥ್ಯ ಇದ್ದು, ಅವರು ಏನನ್ನಾದರೂ ಸಾಧಿಸುತ್ತಾರೆ ಎಂದು ಗೀತಾ ಶಿವರಾಜ್​ ಕುಮಾರ್​ ವಿಶ್ವಾಸ ವ್ಯಕ್ತಪಡಿಸಿದರು.

ಶ್ವೇತ ಬಂಡಿ ಅವರು ಎಲ್ಲಾರನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ. ನನ್ನ ಚುನಾವಣಾ ಪ್ರಚಾರದಲ್ಲಿ ಶ್ವೇತ ಬಂಡಿ ಭಾಗಿಯಾಗಿ ನನಗಿಂತ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಶಿವಮೊಗ್ಗಕ್ಕೆ ಬರಬೇಕು ಎಂದು ಇತ್ತು, ಆದರೆ ಶಿವಣ್ಣನವರ ಆರೋಗ್ಯ ಹದಗೆಟ್ಟ ಕಾರಣದಿಂದ ನಾನು ಬರಲು ಆಗಲಿಲ್ಲ. ನಾನು ಇನ್ಮುಂದೆ ಮುಂದೆ ಏನೇ ಆದ್ರೂ ಸಹ ನಿಮ್ಮ ಜೊತೆಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಈ ಹಿಂದೆ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago