ರಾಜ್ಯ

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯನ್ನು ವಾಪಸ್ ಪಡೆಯಿರಿ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಗಳವಾರ ಪತ್ರ ಬರೆದಿರುವ ಅವರು, ನರೇಗಾ ಯೋಜನೆ ಅಡಿ ಇದ್ದ ೧೦೦ ದಿನಗಳ ಕೆಲಸದ ಗ್ಯಾರಂಟಿಯನ್ನು ವಿಬಿ-ಜಿ ರಾಮ್ ಜಿಯಲ್ಲಿ ೧೨೫ ದಿನಕ್ಕೆ ಹೆಚ್ಚಿಸಿದ್ದೀರಿ. ಮೇಲ್ನೋಟಕ್ಕೆ ಉದ್ಯೋಗದ ದಿನಗಳು ಹೆಚ್ಚಾದಂತೆ ಕಾಣುತ್ತದೆ. ಆದರೆ ವಾಸ್ತವದಲ್ಲಿ ಈ ಕಾಯ್ದೆಯು ಉದ್ಯೋಗ ಖಾತರಿಯನ್ನೇ ಇಲ್ಲವಾಗಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನರೇಗಾವು ಬೇಡಿಕೆ ಆಧಾರಿತ ಯೋಜನೆಯಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಅಗತ್ಯವನ್ನು ಅಧರಿಸಿ, ಕೆಲಸದ ದಿನಗಳನ್ನು ಸೃಷ್ಟಿಸಲಾಗುತ್ತಿತ್ತು. ರಾಜ್ಯದ ಯಾವುದೇ ಭಾಗದಲ್ಲಿಯಾದರೂ ಉದ್ಯೋಗ ಸೃಷ್ಟಿಗೆ ಅವಕಾಶವಿತ್ತು. ಆದರೆ ವಿಬಿ-ಜಿ ರಾಮ್ ಜಿಯು ಇದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಅಧಿಸೂಚಿಸಿದ ಪ್ರದೇಶದಲ್ಲಿ ಮಾತ್ರವೇ ವಿಬಿ-ಜಿರಾಮ್ ಜಿ ಅಡಿಯಲ್ಲಿ ಉದ್ಯೋಗ ನೀಡಬೇಕಾಗುತ್ತದೆ. ಅಂದರೆ, ರಾಜ್ಯದ ಎಲ್ಲ ಭಾಗದ ಜನರಿಗೆ ಉದ್ಯೋಗ ಸಿಗುವುದಿಲ್ಲ. ಕೇಂದ್ರವು ಸೂಚಿಸಿದ ಪ್ರದೇಶದಲ್ಲಿ, ಕೇಂದ್ರವು ಸೂಚಿಸಿದ ಸ್ವರೂಪದ ಕೆಲಸಗಳನ್ನಷ್ಟೇ ಮಾಡಬೇಕಾಗುತ್ತದೆ. ನರೇಗಾವು ನೀಡಿದ್ದ ಉದ್ಯೋಗ ಖಾತರಿಯನ್ನು ನೂತನ ಕಾಯ್ದೆಯು ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ವಿವರಿಸಿದ್ದಾರೆ. ನರೇಗಾದ ಅಡಿಯಲ್ಲಿ ಗ್ರಾಮ ಪಂಚಾಯತಿಗಳು ಉದ್ಯೋಗ ಖಾತರಿಯ ಕಾಮಗಾರಿಗಳನ್ನು ನಿರ್ಧರಿಸುತ್ತಿದ್ದವು. ಈಗ ಕೇಂದ್ರ ಸರ್ಕಾರವು ಆ ಅಧಿಕಾರವನ್ನು ಕಸಿದುಕೊಂಡಿದೆ. ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸಂವಿಧಾನದ ೭೩ನೇ ತಿದ್ದುಪಡಿಯ ಉದ್ದೇಶವನ್ನೇ ವಿಬಿ-ಜಿ ರಾಮ್ ಜಿ ಕಾಯ್ದೆಯು ಬುಡಮೇಲು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

2 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

4 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

5 hours ago