ರಾಜ್ಯ

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯನ್ನು ವಾಪಸ್ ಪಡೆಯಿರಿ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಗಳವಾರ ಪತ್ರ ಬರೆದಿರುವ ಅವರು, ನರೇಗಾ ಯೋಜನೆ ಅಡಿ ಇದ್ದ ೧೦೦ ದಿನಗಳ ಕೆಲಸದ ಗ್ಯಾರಂಟಿಯನ್ನು ವಿಬಿ-ಜಿ ರಾಮ್ ಜಿಯಲ್ಲಿ ೧೨೫ ದಿನಕ್ಕೆ ಹೆಚ್ಚಿಸಿದ್ದೀರಿ. ಮೇಲ್ನೋಟಕ್ಕೆ ಉದ್ಯೋಗದ ದಿನಗಳು ಹೆಚ್ಚಾದಂತೆ ಕಾಣುತ್ತದೆ. ಆದರೆ ವಾಸ್ತವದಲ್ಲಿ ಈ ಕಾಯ್ದೆಯು ಉದ್ಯೋಗ ಖಾತರಿಯನ್ನೇ ಇಲ್ಲವಾಗಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನರೇಗಾವು ಬೇಡಿಕೆ ಆಧಾರಿತ ಯೋಜನೆಯಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಅಗತ್ಯವನ್ನು ಅಧರಿಸಿ, ಕೆಲಸದ ದಿನಗಳನ್ನು ಸೃಷ್ಟಿಸಲಾಗುತ್ತಿತ್ತು. ರಾಜ್ಯದ ಯಾವುದೇ ಭಾಗದಲ್ಲಿಯಾದರೂ ಉದ್ಯೋಗ ಸೃಷ್ಟಿಗೆ ಅವಕಾಶವಿತ್ತು. ಆದರೆ ವಿಬಿ-ಜಿ ರಾಮ್ ಜಿಯು ಇದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಅಧಿಸೂಚಿಸಿದ ಪ್ರದೇಶದಲ್ಲಿ ಮಾತ್ರವೇ ವಿಬಿ-ಜಿರಾಮ್ ಜಿ ಅಡಿಯಲ್ಲಿ ಉದ್ಯೋಗ ನೀಡಬೇಕಾಗುತ್ತದೆ. ಅಂದರೆ, ರಾಜ್ಯದ ಎಲ್ಲ ಭಾಗದ ಜನರಿಗೆ ಉದ್ಯೋಗ ಸಿಗುವುದಿಲ್ಲ. ಕೇಂದ್ರವು ಸೂಚಿಸಿದ ಪ್ರದೇಶದಲ್ಲಿ, ಕೇಂದ್ರವು ಸೂಚಿಸಿದ ಸ್ವರೂಪದ ಕೆಲಸಗಳನ್ನಷ್ಟೇ ಮಾಡಬೇಕಾಗುತ್ತದೆ. ನರೇಗಾವು ನೀಡಿದ್ದ ಉದ್ಯೋಗ ಖಾತರಿಯನ್ನು ನೂತನ ಕಾಯ್ದೆಯು ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ವಿವರಿಸಿದ್ದಾರೆ. ನರೇಗಾದ ಅಡಿಯಲ್ಲಿ ಗ್ರಾಮ ಪಂಚಾಯತಿಗಳು ಉದ್ಯೋಗ ಖಾತರಿಯ ಕಾಮಗಾರಿಗಳನ್ನು ನಿರ್ಧರಿಸುತ್ತಿದ್ದವು. ಈಗ ಕೇಂದ್ರ ಸರ್ಕಾರವು ಆ ಅಧಿಕಾರವನ್ನು ಕಸಿದುಕೊಂಡಿದೆ. ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸಂವಿಧಾನದ ೭೩ನೇ ತಿದ್ದುಪಡಿಯ ಉದ್ದೇಶವನ್ನೇ ವಿಬಿ-ಜಿ ರಾಮ್ ಜಿ ಕಾಯ್ದೆಯು ಬುಡಮೇಲು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago