ಬೆಂಗಳೂರು: ಬಸ್ ಇಲ್ಲದ್ದಕ್ಕೆ 650ಕ್ಕೂ ಹೆಚ್ಚು ಓಂ ಶಕ್ತಿ ಮಾಲಾಧಾರಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೆಗೌಡನ ಪಾಳ್ಯದಲ್ಲಿ ನಡೆದಿದೆ.
ಬಸ್ ವ್ಯವಸ್ಥೆ ಮಾಡಿಸುವುದಾಗಿ ಕುಮಾರ್ ಮತ್ತು ಏಜೆಂಟರು ಹಣ ಪಡೆದುಕೊಂಡಿದ್ದರು. ಅರ್ಚಕ ಮಂಜುನಾಥ್ ಅವರ ಬಳಿ ಸುಮಾರು 2 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರು.
ಓಂ ಶಕ್ತಿ ಮಾಲಾಧಾರಿಗಳ ಪರವಾಗಿ ಅರ್ಚಕ ಮಂಜುನಾಥ ಹಣ ಕೊಟ್ಟಿದ್ದರು. 2 ಲಕ್ಷ ರೂಪಾಯಿ ಹಣ ಪಡೆದು ಕುಮಾರ್ ಮತ್ತು ಏಜೆಂಟರು ಎಸ್ಕೇಪ್ ಆಗಿದ್ದಾರೆ.
ಬೆಳಗ್ಗೆ 5 ಗಂಟೆಯಿಂದ ಬಸ್ ಇಲ್ಲದೆ ನೂರಾರು ಮಾಲಾಧಾರಿಗಳು ಪರದಾಟ ನಡೆಸಿದ್ದಾರೆ. ಪ್ರತಿ ಮಾಲಾ ದಾರಿಯಿಂದ 2300 ರೂಪಾಯಿ ಹಣ ವಸೂಲಿ ಮಾಡಲಾಗಿತ್ತು. ವಿಶ್ರಾಂತಿ, ಶೌಚಾಲಯ ವ್ಯವಸ್ಥೆ ಇಲ್ಲದೆ ಮಹಿಳಾ ಮಾಲಾಧಾರಿಗಳು ಪರದಾಟ ನಡೆಸಿದ್ದಾರೆ.
ಮಾದನಾಯಕನ ಹಳ್ಳಿ ಠಾಣೆ ಸಮೀಪವೇ ಘಟನೆ ನಡೆದರೂ ಪೊಲೀಸರು ಮೌನ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…