ರಾಜ್ಯ

ಬಸ್‌ ವ್ಯವಸ್ಥೆ ಮಾಡುವುದಾಗಿ ಹಣ ಪಡೆದು ಪರಾರಿ : ಓಂ ಶಕ್ತಿ ಮಹಿಳೆಯರ ಪರದಾಟ!

ಬೆಂಗಳೂರು: ಬಸ್ ಇಲ್ಲದ್ದಕ್ಕೆ 650ಕ್ಕೂ ಹೆಚ್ಚು ಓಂ ಶಕ್ತಿ ಮಾಲಾಧಾರಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೆಗೌಡನ ಪಾಳ್ಯದಲ್ಲಿ ನಡೆದಿದೆ.

ಬಸ್ ವ್ಯವಸ್ಥೆ ಮಾಡಿಸುವುದಾಗಿ ಕುಮಾರ್ ಮತ್ತು ಏಜೆಂಟರು ಹಣ ಪಡೆದುಕೊಂಡಿದ್ದರು. ಅರ್ಚಕ ಮಂಜುನಾಥ್ ಅವರ ಬಳಿ ಸುಮಾರು 2 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರು.

ಓಂ ಶಕ್ತಿ ಮಾಲಾಧಾರಿಗಳ ಪರವಾಗಿ ಅರ್ಚಕ ಮಂಜುನಾಥ ಹಣ ಕೊಟ್ಟಿದ್ದರು. 2 ಲಕ್ಷ ರೂಪಾಯಿ ಹಣ ಪಡೆದು ಕುಮಾರ್ ಮತ್ತು ಏಜೆಂಟರು ಎಸ್ಕೇಪ್ ಆಗಿದ್ದಾರೆ.

ಬೆಳಗ್ಗೆ 5 ಗಂಟೆಯಿಂದ ಬಸ್ ಇಲ್ಲದೆ ನೂರಾರು ಮಾಲಾಧಾರಿಗಳು ಪರದಾಟ ನಡೆಸಿದ್ದಾರೆ. ಪ್ರತಿ ಮಾಲಾ ದಾರಿಯಿಂದ 2300 ರೂಪಾಯಿ ಹಣ ವಸೂಲಿ ಮಾಡಲಾಗಿತ್ತು. ವಿಶ್ರಾಂತಿ, ಶೌಚಾಲಯ ವ್ಯವಸ್ಥೆ ಇಲ್ಲದೆ ಮಹಿಳಾ ಮಾಲಾಧಾರಿಗಳು ಪರದಾಟ ನಡೆಸಿದ್ದಾರೆ.

ಮಾದನಾಯಕನ ಹಳ್ಳಿ ಠಾಣೆ ಸಮೀಪವೇ ಘಟನೆ ನಡೆದರೂ ಪೊಲೀಸರು ಮೌನ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago