ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಸಂಘರ್ಷ, ತ್ಯಾಗ, ಬಲಿದಾನಗಳಿಗೆ ಸಿದ್ಧರಾಗದಿದ್ದರೆ ನಮ್ಮ ಹಕ್ಕುಗಳು ನಮಗೆ ದೊರಕುವುದು ಕನಸಿನ ಮಾತು.
ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಸಾಧ್ಯವಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಡಲೇಬೇಕು ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದ್ದು, ಕಾನೂನು ಇಲ್ಲವೇ ಎಂಬಂತಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಎಎಪಿ ಮೌನವಹಿಸಿರೋದು ಖಂಡನೀಯ. ನಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ರಸ್ತೆಗೆ ಇಳಿಯಬೇಕು ಎಂದು ಅಬ್ದುಲ್ ಮಜೀದ್ ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…