ರಾಜ್ಯ

ಬಲಿದಾನ ಮಾಡಲು ಸಿದ್ದರಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ !

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಸಂಘರ್ಷ, ತ್ಯಾಗ, ಬಲಿದಾನಗಳಿಗೆ ಸಿದ್ಧರಾಗದಿದ್ದರೆ ನಮ್ಮ ಹಕ್ಕುಗಳು ನಮಗೆ ದೊರಕುವುದು ಕನಸಿನ ಮಾತು.

ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಸಾಧ್ಯವಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಡಲೇಬೇಕು ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದ್ದು, ಕಾನೂನು ಇಲ್ಲವೇ ಎಂಬಂತಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಎಎಪಿ ಮೌನವಹಿಸಿರೋದು ಖಂಡನೀಯ. ನಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ರಸ್ತೆಗೆ ಇಳಿಯಬೇಕು ಎಂದು ಅಬ್ದುಲ್ ಮಜೀದ್ ಹೇಳಿದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

3 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

3 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

3 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

6 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

6 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

6 hours ago