ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಸಂಘರ್ಷ, ತ್ಯಾಗ, ಬಲಿದಾನಗಳಿಗೆ ಸಿದ್ಧರಾಗದಿದ್ದರೆ ನಮ್ಮ ಹಕ್ಕುಗಳು ನಮಗೆ ದೊರಕುವುದು ಕನಸಿನ ಮಾತು.
ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಸಾಧ್ಯವಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಡಲೇಬೇಕು ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದ್ದು, ಕಾನೂನು ಇಲ್ಲವೇ ಎಂಬಂತಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಎಎಪಿ ಮೌನವಹಿಸಿರೋದು ಖಂಡನೀಯ. ನಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ರಸ್ತೆಗೆ ಇಳಿಯಬೇಕು ಎಂದು ಅಬ್ದುಲ್ ಮಜೀದ್ ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…