ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು.
ಘಟನೆ ನಡೆದ ದಿನ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಆ ದಿನ ರಾತ್ರಿ ಹಲವು ನಾಟಕೀಯ ಬೆಳವಣಿಗೆ ನಡೆದವು. ಮಾರನೇ ದಿನ ಕೋರ್ಟ್ನಲ್ಲಿ ಬಿಜೆಪಿ ನಾಯಕನಿಗೆ ಜಾಮೀನು ಸಿಕ್ಕಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಂದರ್ಶನವೊಂದರಲ್ಲಿ ಸಿ.ಟಿ.ರವಿ, ಅಕ್ಕ ನಾನು ಹೃದಯದಿಂದ ಕೆಟ್ಟವನಲ್ಲ ಎಂದು ತಿಳಿಸಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…