ರಾಜ್ಯ

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ 10 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಸೆರೆ

ಹೈದರಾಬಾದ್:‌ 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಬಾಲಕಿ ಈಗ ಗರ್ಭಿಣಿಯಾಗಿದ್ದು, ಆರೋಪಿಗಳು ಅತ್ಯಾಚಾರವೆಸಗುವಾಗ ಬಾಲಕಿಗೆ ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ತಿನ್ನಿಸಿ ಅತ್ಯಾಚಾರವೆಸಗಿದ್ದರು ಎಂದು ಹೈದರಾಬಾದ್‌ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಚಕ್ಕೋಲು ನರೇಶ್‌(26), ವಿಜಯ್‌ ಕುಮಾರ್(‌23), ಬಾಲಾಜಿ(23), ಗುಡ್ಡಂತಿ ಕೃಷ್ಣ(22) ಕಿರಣ್‌ ಕುಮಾರ್(‌26) ಬೊಳ್ಳೆಪೋಗು ಅಜಯ್‌ (23)‌, ಜೇಮ್ಸ್ ಕ್ಸೇವಿಯರ್(‌24), ದೀಪಕ್(‌25), ಸಬವತ್‌ ಹತ್ಯಾ ನಾಯ್ಕ್(‌25), ಇಂಜಮುರಿ ಮಧು(30) ಎಂದು ಗುರುತಿಸಲಾಗಿದೆ.

ಈ ಆರೋಪಿಗಳ ಗುಂಪು, ನಾಲ್ಕನೇ ತರಗತಿ ಬಾಲಕಿಯ ಜೊತೆ ಸ್ನೇಹ ಬೆಳೆಸಿ, ಆಕೆಯನ್ನು ಅಪಹರಿಸಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಅಲ್ಲದೆ, ಮಾದಕ ತುಂಬಿದ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿ ಕುಡಿಸಿದ್ದರು. ನಿರಂತರವಾಗಿ ಅತ್ಯಾಚಾರ ನಡೆಸಿದ್ದರಿಂದ ಆ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ ದ್ವಿಚಕ್ರವಾಹನ ಸೇರಿದಂತೆ ಮೊಬೈಲ್‌, ವಾಹನಗಳು, ಸಿಮ್‌ ಕಾರ್ಡ್‌ಗಳು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಾಗಿರುವ ಎಲ್ಲಾ ಆರೋಪಿಗಳು ಅಪರಾಧ ಚುಟುವಟಿಕೆಗಳ ಇತಿಹಾಸ ಹೊಂದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

33 mins ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

38 mins ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

42 mins ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

47 mins ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

10 hours ago