ಹೈದರಾಬಾದ್: 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಬಾಲಕಿ ಈಗ ಗರ್ಭಿಣಿಯಾಗಿದ್ದು, ಆರೋಪಿಗಳು ಅತ್ಯಾಚಾರವೆಸಗುವಾಗ ಬಾಲಕಿಗೆ ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ತಿನ್ನಿಸಿ ಅತ್ಯಾಚಾರವೆಸಗಿದ್ದರು ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಚಕ್ಕೋಲು ನರೇಶ್(26), ವಿಜಯ್ ಕುಮಾರ್(23), ಬಾಲಾಜಿ(23), ಗುಡ್ಡಂತಿ ಕೃಷ್ಣ(22) ಕಿರಣ್ ಕುಮಾರ್(26) ಬೊಳ್ಳೆಪೋಗು ಅಜಯ್ (23), ಜೇಮ್ಸ್ ಕ್ಸೇವಿಯರ್(24), ದೀಪಕ್(25), ಸಬವತ್ ಹತ್ಯಾ ನಾಯ್ಕ್(25), ಇಂಜಮುರಿ ಮಧು(30) ಎಂದು ಗುರುತಿಸಲಾಗಿದೆ.
ಈ ಆರೋಪಿಗಳ ಗುಂಪು, ನಾಲ್ಕನೇ ತರಗತಿ ಬಾಲಕಿಯ ಜೊತೆ ಸ್ನೇಹ ಬೆಳೆಸಿ, ಆಕೆಯನ್ನು ಅಪಹರಿಸಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಅಲ್ಲದೆ, ಮಾದಕ ತುಂಬಿದ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿ ಕುಡಿಸಿದ್ದರು. ನಿರಂತರವಾಗಿ ಅತ್ಯಾಚಾರ ನಡೆಸಿದ್ದರಿಂದ ಆ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ದ್ವಿಚಕ್ರವಾಹನ ಸೇರಿದಂತೆ ಮೊಬೈಲ್, ವಾಹನಗಳು, ಸಿಮ್ ಕಾರ್ಡ್ಗಳು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಾಗಿರುವ ಎಲ್ಲಾ ಆರೋಪಿಗಳು ಅಪರಾಧ ಚುಟುವಟಿಕೆಗಳ ಇತಿಹಾಸ ಹೊಂದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…