ರಾಜ್ಯ

ಹಾಸ್ಟಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಬಾಲಕಿ ; 6 ಮಂದಿ ವಿರುದ್ಧ ಎಫ್‌ಐಆರ್‌

ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.

ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಕೆ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ರಕ್ಷಣೆಗೆ ನಿಗಾ ವಹಿಸದ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾಗಿದ್ದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಆರೋಪಿ ಹನುಮನಗೌಡ, ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿಗಳಾದ ಭರತೇಶ ಹಿರೇಮಠ ಹಾಗೂ ಸಬೀಯಾ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ವಸತಿ ನಿಲಯವಿರುವ ಗ್ರಾಮದ ಶಾಲೆಯಲ್ಲಿ ಎಂಟನೇ ತರಗತಿಯಿಂದಲೇ ಓದುತ್ತಿರುವ ಬಾಲಕಿಗೆ ಆರೋಪಿ ಮೊದಲಿನಿಂದ ಪರಿಚಿತನಾಗಿದ್ದ. ಹನುಮನಗೌಡ ನನ್ನನ್ನು ಪ್ರೀತಿಸುತ್ತಿದ್ದ. ಮುಂದೆ ಮದುವೆಯಾಗುವುದಾಗಿ ಹೇಳಿ ಶಾಲೆ ಬಿಟ್ಟ ನಂತರ ಹಲವು ಬಾರಿ ಆತ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಬುಧವಾರ ಬೆಳಿಗ್ಗೆ 5.30ರ ಸುಮಾರಿಗೆ ಬಾಲಕಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಶೌಚಾಲಯಕ್ಕೆ ತೆರಳಿದಾಗ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ನೀಡಿದ ದೂರಿನ ಮೇರೆಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

43 mins ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

2 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

3 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

4 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

5 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

5 hours ago