ರಾಜ್ಯ

ಹಾಸ್ಟಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಬಾಲಕಿ ; 6 ಮಂದಿ ವಿರುದ್ಧ ಎಫ್‌ಐಆರ್‌

ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.

ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಕೆ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ರಕ್ಷಣೆಗೆ ನಿಗಾ ವಹಿಸದ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾಗಿದ್ದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಆರೋಪಿ ಹನುಮನಗೌಡ, ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿಗಳಾದ ಭರತೇಶ ಹಿರೇಮಠ ಹಾಗೂ ಸಬೀಯಾ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ವಸತಿ ನಿಲಯವಿರುವ ಗ್ರಾಮದ ಶಾಲೆಯಲ್ಲಿ ಎಂಟನೇ ತರಗತಿಯಿಂದಲೇ ಓದುತ್ತಿರುವ ಬಾಲಕಿಗೆ ಆರೋಪಿ ಮೊದಲಿನಿಂದ ಪರಿಚಿತನಾಗಿದ್ದ. ಹನುಮನಗೌಡ ನನ್ನನ್ನು ಪ್ರೀತಿಸುತ್ತಿದ್ದ. ಮುಂದೆ ಮದುವೆಯಾಗುವುದಾಗಿ ಹೇಳಿ ಶಾಲೆ ಬಿಟ್ಟ ನಂತರ ಹಲವು ಬಾರಿ ಆತ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಬುಧವಾರ ಬೆಳಿಗ್ಗೆ 5.30ರ ಸುಮಾರಿಗೆ ಬಾಲಕಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಶೌಚಾಲಯಕ್ಕೆ ತೆರಳಿದಾಗ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ನೀಡಿದ ದೂರಿನ ಮೇರೆಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

3 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

4 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

10 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

10 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

10 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

10 hours ago