ರಾಜ್ಯ

ಹಾಸ್ಟಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಬಾಲಕಿ ; 6 ಮಂದಿ ವಿರುದ್ಧ ಎಫ್‌ಐಆರ್‌

ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.

ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಕೆ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ರಕ್ಷಣೆಗೆ ನಿಗಾ ವಹಿಸದ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾಗಿದ್ದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಆರೋಪಿ ಹನುಮನಗೌಡ, ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿಗಳಾದ ಭರತೇಶ ಹಿರೇಮಠ ಹಾಗೂ ಸಬೀಯಾ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ವಸತಿ ನಿಲಯವಿರುವ ಗ್ರಾಮದ ಶಾಲೆಯಲ್ಲಿ ಎಂಟನೇ ತರಗತಿಯಿಂದಲೇ ಓದುತ್ತಿರುವ ಬಾಲಕಿಗೆ ಆರೋಪಿ ಮೊದಲಿನಿಂದ ಪರಿಚಿತನಾಗಿದ್ದ. ಹನುಮನಗೌಡ ನನ್ನನ್ನು ಪ್ರೀತಿಸುತ್ತಿದ್ದ. ಮುಂದೆ ಮದುವೆಯಾಗುವುದಾಗಿ ಹೇಳಿ ಶಾಲೆ ಬಿಟ್ಟ ನಂತರ ಹಲವು ಬಾರಿ ಆತ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಬುಧವಾರ ಬೆಳಿಗ್ಗೆ 5.30ರ ಸುಮಾರಿಗೆ ಬಾಲಕಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಶೌಚಾಲಯಕ್ಕೆ ತೆರಳಿದಾಗ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ನೀಡಿದ ದೂರಿನ ಮೇರೆಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago