ರಾಜ್ಯ

ಇನ್ನೂ ಪತ್ತೆಯಾಗದ ಬಾಲಕಿ ಶ್ರೀನಂದಾ ; ಚಂದ್ರದ್ರೋಣ ಬೆಟ್ಟದಲ್ಲಿ ಮುಂದುವರೆದ ಶೋಧ ಕಾರ್ಯ

ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ ದಟ್ಟ ಕಾನನದಲ್ಲಿ ಕಾಣೆಯಾಗಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಾಲಕಿ ಶ್ರೀನಂದಾ ಮಂಗಳವಾರ ಸಂಜೆ 5.30 ಕ್ಕೆ ನಾಪತ್ತೆಯಾಗಿದ್ದಾಳೆ. ಘಟನೆಯ ತೀವ್ರತೆಯನ್ನು ಅರಿತ ಸಚಿವರು, ಕೇವಲ ಪೊಲೀಸ್ ಮತ್ತು ಜಿಲ್ಲಾಡಳಿತವಷ್ಟೇ ಅಲ್ಲದೇ, ದಟ್ಟ ಅರಣ್ಯದಲ್ಲಿ ಸಂಚರಿಸಲು ಪರಿಣಿತಿ ಹೊಂದಿರುವ ಅರಣ್ಯ ಇಲಾಖೆಯ ವಿಶೇಷ ತಂಡವನ್ನು ಕಳುಹಿಸಿದ್ದಾರೆ.

ಬಾಲಕಿ ನಾಪತ್ತೆಯಾದ ಸ್ಥಳವು ಅತ್ಯಂತ ಕಡಿದಾದ ಗುಡ್ಡಗಳಿಂದ ಕೂಡಿದೆ. ಆ ಪ್ರದೇಶವು ತಾಂತ್ರಿಕವಾಗಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರದಿದ್ದರೂ, ಬಾಲಕಿಯ ಪ್ರಾಣ ಉಳಿಸುವ ದೃಷ್ಟಿಯಿಂದ ಇಲಾಖೆಯ ಬೆಂಬಲ ಅತ್ಯಗತ್ಯ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಚಿವರು, ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದಟ್ಟವಾದ ಗಿಡಗಂಟಿಗಳು ಮತ್ತು ಗುಡ್ಡಗಾಡು ಪ್ರದೇಶವಾಗಿರುವುದರಿಂದ, ಮನುಷ್ಯನ ಕಣ್ಣಿಗೆ ನಿಲುಕದ ಜಾಗಗಳನ್ನು ಪತ್ತೆಹಚ್ಚಲು ಥರ್ಮಲ್ ಸೆನ್ಸರ್ ಇರುವ ಡ್ರೋನ್ ಗಳನ್ನು ಬಳಸಲು ಸೂಚಿಸಲಾಗಿದೆ. ಅರಣ್ಯ ಇಲಾಖೆಯ ನುರಿತ ಸಿಬ್ಬಂದಿ ಈಗ ಪೊಲೀಸ್ ಪಡೆಯೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾರ್ಯಾಚರಣೆ ನಡೆಸಲಿದ್ದಾರೆ.

ಸವಾಲಿನ ಹಾದಿ
ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಏ.7ರ ಮಧ್ಯರಾತ್ರಿ 1 ಗಂಟೆವರೆಗೆ ಹುಡುಕಾಡಿದ್ದಾರೆ. ಆದರೆ, ಆಕೆಯ ಸುಳಿವು ಸಿಕ್ಕಿಲ್ಲ. ಕಗ್ಗತ್ತಲು, ದಟ್ಟ ಕಾನನ, ಬೆಟ್ಟ-ಗುಡ್ಡಗಳ ಇಳಿಜಾರು ಪ್ರದೇಶ ಆಗಿದ್ದರಿಂದ ಕಾರ್ಯಾಚರಣೆ ಕೈಬಿಟ್ಟ ಅಧಿಕಾರಿಗಳು ಏ.8ರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರೆಸಿದ್ದರು. ಇದೀಗ, ಶೋಧ ಕಾರ್ಯಕ್ಕೆ ಎಸ್.ಡಿ.ಆರ್.ಎಫ್ ತಂಡ ಕೂಡ ಜೊತೆಗೂಡಿದೆ.

ಬೆಳಗಿನ ಜಾವ 5 ಗಂಟೆಯಿಂದಲೇ ಶೋಧ ಕಾರ್ಯ ಆರಂಭಿಸಿದ ಸಿಬ್ಬಂದಿ ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಮುಂದಾಗಿದ್ದಾರೆ. ಮೂರು ಇಲಾಖೆಯ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿದ್ದಾರೆ. ಬಾಲಕಿ ನಾಪತ್ತೆಯಾದ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತದೆಯೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡುತ್ತಿದೆ. ಆದರೆ, ಜಾರಿದ್ದಾಳೆ ಎನ್ನವುದಕ್ಕೆ ಮಳೆ ಇಲ್ಲ. ಕಾಡು ಬೇಸಿಗೆಗೆ ಒಣಗಿ ಬಿಡಿಬಿಡಿಯಾಗಿದೆ. ನಾಪತ್ತೆಯಾದ ಒಂದು ಗಂಟೆಯಿಂದಲೇ ಹತ್ತಾರು ಜನ ಹುಡುಕಾಡಿದರೂ ಸಿಗದಿರೋದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago