ರಾಜ್ಯ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,
ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಇನ್ನು ರಾಜ್ಯ ಸರ್ಕಾರ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

6 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

27 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

53 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago