ರಾಜ್ಯ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,
ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಇನ್ನು ರಾಜ್ಯ ಸರ್ಕಾರ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago