ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ವಿನೂತನವಾಗಿ ಚಳವಳಿ ನಡೆಸಿದರು.
ಭಾನುವಾರ ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಆವರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕಾರ್ಯಕರ್ತರೊಂದಿಗೆ ಆಗಮಿಸಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ಜಾರಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಮಾಡಲು ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ‘ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಪುರುಷರಿಗೂ ನೀಡಬೇಕು. ಇದರಿಂದ ಅವರ ಆದಾಯದ ಗುಣಮಟ್ಟ ಹೆಚ್ಚಾಗಲಿದೆ. ಜೊತೆಗೆ ಮಾನಸಿಕ ಶಕ್ತಿಯನ್ನು ಅವರಿಗೆ ತುಂಬಿದಂತೆ ಆಗಲಿದೆ’ ಎಂದು ಇದೇ ವೇಳೆ ಆಗ್ರಹಿಸಿದರು.
ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಾಗುತ್ತಿದೆ. ಅದೇ ರೀತಿ ಮನೆಯ ಯಜಮಾನನಿಗೂ ‘ನಾರಾಯಣ’ ಎನ್ನುವ ಹೆಸರಿನ ಅಡಿಯಲ್ಲಿ 2000 ರೂಪಾಯಿ ಜಾರಿ ಮಾಡಬೇಕು. ಶಕ್ತಿ ಯೋಜನೆಯ ಇದೇ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಅವರು ಕೋರಿದರು.
ಐತಿಹಾಸಿಕ ಮೈಸೂರು ದಸರಾ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದಲೂ ಮೈಸೂರಿಗೆ ಆಗಮಿಸಲಿದ್ದಾರೆ. ಬಸ್ ಪ್ರಯಾಣವಾಗಲಿ, ಗೃಹಲಕ್ಷ್ಮಿಯಾಗಲಿ ಬರೀ ಮಹಿಳೆಯರಿಗೆ ಮಾಡಿದ್ದೀರಿ. ಇದನ್ನು ನಾನು ವಿರೋಧಿಸುವುದಿಲ್ಲ. ಆದರೆ ಪುರುಷರಿಗೂ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಬೇಕೆಂದು ವಾಟಾಳ್ ಒತ್ತಾಯಿಸಿದರು.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…