ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ವಿನೂತನವಾಗಿ ಚಳವಳಿ ನಡೆಸಿದರು.
ಭಾನುವಾರ ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಆವರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕಾರ್ಯಕರ್ತರೊಂದಿಗೆ ಆಗಮಿಸಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ಜಾರಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಮಾಡಲು ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ‘ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಪುರುಷರಿಗೂ ನೀಡಬೇಕು. ಇದರಿಂದ ಅವರ ಆದಾಯದ ಗುಣಮಟ್ಟ ಹೆಚ್ಚಾಗಲಿದೆ. ಜೊತೆಗೆ ಮಾನಸಿಕ ಶಕ್ತಿಯನ್ನು ಅವರಿಗೆ ತುಂಬಿದಂತೆ ಆಗಲಿದೆ’ ಎಂದು ಇದೇ ವೇಳೆ ಆಗ್ರಹಿಸಿದರು.
ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಾಗುತ್ತಿದೆ. ಅದೇ ರೀತಿ ಮನೆಯ ಯಜಮಾನನಿಗೂ ‘ನಾರಾಯಣ’ ಎನ್ನುವ ಹೆಸರಿನ ಅಡಿಯಲ್ಲಿ 2000 ರೂಪಾಯಿ ಜಾರಿ ಮಾಡಬೇಕು. ಶಕ್ತಿ ಯೋಜನೆಯ ಇದೇ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಅವರು ಕೋರಿದರು.
ಐತಿಹಾಸಿಕ ಮೈಸೂರು ದಸರಾ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದಲೂ ಮೈಸೂರಿಗೆ ಆಗಮಿಸಲಿದ್ದಾರೆ. ಬಸ್ ಪ್ರಯಾಣವಾಗಲಿ, ಗೃಹಲಕ್ಷ್ಮಿಯಾಗಲಿ ಬರೀ ಮಹಿಳೆಯರಿಗೆ ಮಾಡಿದ್ದೀರಿ. ಇದನ್ನು ನಾನು ವಿರೋಧಿಸುವುದಿಲ್ಲ. ಆದರೆ ಪುರುಷರಿಗೂ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಬೇಕೆಂದು ವಾಟಾಳ್ ಒತ್ತಾಯಿಸಿದರು.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…