ರಾಜ್ಯ

ಪುರಷರಿಗೂ ʼಗ್ಯಾರಂಟಿʼ ಯೋಜನೆ ನೀಡಿ: ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ವಿನೂತನವಾಗಿ ಚಳವಳಿ ನಡೆಸಿದರು.

ಭಾನುವಾರ ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಆವರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕಾರ್ಯಕರ್ತರೊಂದಿಗೆ ಆಗಮಿಸಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ಜಾರಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಮಾಡಲು ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ‘ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಪುರುಷರಿಗೂ ನೀಡಬೇಕು. ಇದರಿಂದ ಅವರ ಆದಾಯದ ಗುಣಮಟ್ಟ ಹೆಚ್ಚಾಗಲಿದೆ. ಜೊತೆಗೆ ಮಾನಸಿಕ ಶಕ್ತಿಯನ್ನು ಅವರಿಗೆ ತುಂಬಿದಂತೆ ಆಗಲಿದೆ’ ಎಂದು ಇದೇ ವೇಳೆ ಆಗ್ರಹಿಸಿದರು.

ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಾಗುತ್ತಿದೆ. ಅದೇ ರೀತಿ ಮನೆಯ ಯಜಮಾನನಿಗೂ ‘ನಾರಾಯಣ’ ಎನ್ನುವ ಹೆಸರಿನ ಅಡಿಯಲ್ಲಿ 2000 ರೂಪಾಯಿ ಜಾರಿ ಮಾಡಬೇಕು. ಶಕ್ತಿ ಯೋಜನೆಯ ಇದೇ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಅವರು ಕೋರಿದರು.

ಐತಿಹಾಸಿಕ ಮೈಸೂರು ದಸರಾ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದಲೂ ಮೈಸೂರಿಗೆ ಆಗಮಿಸಲಿದ್ದಾರೆ. ಬಸ್ ಪ್ರಯಾಣವಾಗಲಿ, ಗೃಹಲಕ್ಷ್ಮಿಯಾಗಲಿ ಬರೀ ಮಹಿಳೆಯರಿಗೆ ಮಾಡಿದ್ದೀರಿ. ಇದನ್ನು ನಾನು ವಿರೋಧಿಸುವುದಿಲ್ಲ. ಆದರೆ ಪುರುಷರಿಗೂ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಬೇಕೆಂದು ವಾಟಾಳ್ ಒತ್ತಾಯಿಸಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago