ರಾಜ್ಯ

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ (ಆ.5) ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದು ವಿವರಿಸಿದರು.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಅವರು ಹೇಳಿದರು.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶ: ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದರು.

ಜಿಲ್ಲೆಯಲ್ಲಿ 41706 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ, 372 ಹೆಕ್ಟೇರ್‌ ತೋಟಗಾರಿಕಾ ಬೆಳೆ ಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್‌ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು.

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಶೀಲ್ದಾರ್‌ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

20 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

26 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

30 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago