pm
ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.
ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಹಾಗೂ 3ನೇ ಹಂತದ ಮೆಟ್ರೋ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಮಾತನಾಡಿದರು. ಪರೋಕ್ಷವಾಗಿ ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಡುತ್ತಿರುವ ಸಹಕಾರ, ಅನುದಾನ ಸಾಲುತ್ತಿಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.
ಮೆಟ್ರೋ ರೈಲ್ವೆ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ ಶೇ. 50ರ ವೆಚ್ಚದಲ್ಲಿ ಅನುಷ್ಠಾನಗೊಳ್ಳಬೇಕೆಂಬ ಒಪ್ಪಂದವಾಗಿತ್ತು. ಆದರೆ ಇಲ್ಲಿವರೆಗೂ ರಾಜ್ಯ ಸರ್ಕಾರವೇ ಹೆಚ್ಚಿನ ಹಣ ಖರ್ಚು ಮಾಡುತ್ತಿವೆ. ಕೇಂದ್ರ ಸರ್ಕಾರ ಇನ್ನು ಮುಂದಾದರೂ ಒಪ್ಪಂದದಂತೆ ಹೆಚ್ಚಿನ ಹಣ ನೀಡಲಿ ಎಂದು ಅಂಕಿ ಅಂಶಗಳನ್ನು ವಿವರಿಸಿದರು. ಮುಖ್ಯಮಂತ್ರಿಯವರ ಮಾತುಗಳನ್ನು ಪ್ರಧಾನಿಯವರು ಬಹಳ ಆಸಕ್ತಿಯಿಂದ ಆಲಿಸುತ್ತಿದ್ದದ್ದು, ಕಂಡು ಬಂತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…