ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು, ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಹೊರಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.
ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…