ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು, ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಹೊರಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.
ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…