ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು, ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಹೊರಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.
ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…