ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು.
ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರ ಆತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…