ರಾಜ್ಯ

ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕ ರಾಜ್ಯವನ್ನು ಮುಂಚೂಣಿಯಲ್ಲಿರಿಸುವ ಗುರಿ : ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು.

ಭೇಟಿಯ ನಂತರ ಸಚಿವ ಎನ್‌ ಎಸ್‌ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ರಾಷ್ಟ್ರದ ಕೇಂದ್ರ ಬಿಂದುವಾಗಿ ರೂಪಿಸುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕ್ವಾಂಟಮ್ ತಂತ್ರಜ್ಞಾನವು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯತ್ತ ನಡೆಸುತ್ತಿದೆ. ಕ್ವಾಂಟಮ್ ಕಂಪ್ಯೂಟರ್ ಮಾತ್ರವಲ್ಲದೆ, ಕ್ವಾಂಟಮ್ ಸುರಕ್ಷಿತ ಸೈಬರ್ ತಂತ್ರಜ್ಞಾನ, ಕ್ವಾಂಟಮ್ ಇಮೇಜಿಂಗ್, ಹಾಗೂ ಕ್ವಾಂಟಮ್ ನೆಟ್‌ವರ್ಕಿಂಗ್ ಎಲ್ಲವೂ ಭವಿಷ್ಯದ ತಂತ್ರಜ್ಞಾನದ ಮೂಲಭೂತ ಅಂಶಗಳಾಗಿವೆ. ಇದನ್ನು ಮುಂಚಿತವಾಗಿ ಅಳವಡಿಸಿಕೊಂಡ ರಾಷ್ಟ್ರಗಳು ಮತ್ತು ರಾಜ್ಯಗಳು ತಾಂತ್ರಿಕ ಮತ್ತು ಆರ್ಥಿಕವಾಗಿ ಮುಂಚೂಣಿಗೆ ಬರಲಿವೆ.”

“ಬೆಂಗಳೂರು ಭಾರತದ ನವೀನತೆಯ ರಾಜಧಾನಿಯಾಗಿದ್ದು, ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಎಲ್ಲ ರೀತಿಯ ಪೂರಕ ಸೌಕರ್ಯಗಳನ್ನು ಹೊಂದಿದೆ. ಇಲ್ಲಿ ಶ್ರೇಷ್ಟ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕಾ ಪಾಠಶಾಲೆಗಳು, ನಿಪುಣ ತಂತ್ರಜ್ಞಾನ ಸಿಬ್ಬಂದಿ ಹಾಗೂ ತಂತ್ರಜ್ಞಾನ ಸ್ನೇಹಿ ಮೂಲಸೌಕರ್ಯಗಳು ಲಭ್ಯವಿರುವುದರಿಂದ ಬೆಂಗಳೂರನ್ನು ಕ್ವಾಂಟಮ್ ತಂತ್ರಜ್ಞಾನದ ಕೇಂದ್ರೀಯ ತಾಣವನ್ನಾಗಿ ರೂಪಿಸುವ ಉದ್ದೇಶ ನಮ್ಮದು. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶವನ್ನು ಆಯೋಜಿಸುತ್ತಿದ್ದೇವೆ”

ಈ ಭೇಟಿಯ ಸಮಯದಲ್ಲಿ QpiAI ಸಂಸ್ಥೆಯ ಪ್ರತಿನಿಧಿಗಳು ತಾವು ಕರ್ನಾಟಕದಲ್ಲಿ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಸದುದ್ದೇಶದಿಂದ ಕೆಲಸ ಮಾಡುತ್ತಿರುವುದನ್ನು ವಿವರಿಸಿದರು. ಸಂಸ್ಥೆ ಸಂಶೋಧನೆ, ಪ್ರತಿಭೆ ಮತ್ತು ಸಹಯೋಗದ ಆಧಾರದ ಮೇಲೆ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಕ್ವಾಂಟಮ್ ಉನ್ನತಿಯನ್ನು ತಲುಪಿಸಬೇಕೆಂಬ ಗುರಿ ಹೊಂದಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕೆಸ್ಟೆಪ್ಸ್‌ ನಿರ್ದೇಶಕರಾದ ಸದಾಶಿವ ಪ್ರಭು, ಕ್ಯೂಪೈ ಸಂಸ್ಥಾಪಕರಾದ ನಾಗೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago