ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ
ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು ಎಂದರು.
ಈ ಲಕ್ಷ್ಮೀ ಹೆಬ್ಬಾಳ್ಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.
ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…