ರಾಜ್ಯ

ಜನವರಿ 22ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ: ಬಿಕೆ ಹರಿಪ್ರಸಾದ್‌

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ರಾಮಮಂದಿರವನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ತೆರಳಲು ಈಗಾಗಲೇ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಬೇಕಾದ ವಿಮಾನ ಸೇವೆ, ರೈಲು ಸೇವೆಗಳನ್ನು ಸರ್ಕಾರ ಆಯೋಜನೆ ಮಾಡಲು ಮುಂದಾಗಿದೆ.

ಈ ಕುರಿತು ಇದೀಗ ಕಾಂಗ್ರೆಸ್‌ ಮುಖಂಡ ಬಿ ಕೆ ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್‌ ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ, ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ, ಅದೊಂದು ರಾಜಕೀಯ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿಯಾಗಬೇಕಿತ್ತು, ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿಯ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಹೋಗುತ್ತಿದ್ದೆವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ಮೋದಿ, ಅಮಿತ್‌ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಇದು ರಾಜಕೀಯ ಕಾರ್ಯಕ್ರಮ ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ. ಅಯೋಧ್ಯೆ ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಇನ್ನು ನನಗೆ ಸಿದ್ದರಾಮಯ್ಯವರೇ ರಾಮ ಎಂದು ಹೆಚ್‌ ಆಂಜನೇಯ ನೀಡಿದ ಹೇಳಿಕೆ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌ ಎಲ್ಲರಿಗೂ ಭಕ್ತರಿರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

1 hour ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago