ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ರಾಮಮಂದಿರವನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ತೆರಳಲು ಈಗಾಗಲೇ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಬೇಕಾದ ವಿಮಾನ ಸೇವೆ, ರೈಲು ಸೇವೆಗಳನ್ನು ಸರ್ಕಾರ ಆಯೋಜನೆ ಮಾಡಲು ಮುಂದಾಗಿದೆ.
ಈ ಕುರಿತು ಇದೀಗ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ, ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ.
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ, ಅದೊಂದು ರಾಜಕೀಯ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿಯಾಗಬೇಕಿತ್ತು, ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿಯ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಹೋಗುತ್ತಿದ್ದೆವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ಮೋದಿ, ಅಮಿತ್ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಇದು ರಾಜಕೀಯ ಕಾರ್ಯಕ್ರಮ ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ. ಅಯೋಧ್ಯೆ ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಇನ್ನು ನನಗೆ ಸಿದ್ದರಾಮಯ್ಯವರೇ ರಾಮ ಎಂದು ಹೆಚ್ ಆಂಜನೇಯ ನೀಡಿದ ಹೇಳಿಕೆ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್ ಎಲ್ಲರಿಗೂ ಭಕ್ತರಿರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…