ರಾಜ್ಯ

ಜನವರಿ 22ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ: ಬಿಕೆ ಹರಿಪ್ರಸಾದ್‌

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ರಾಮಮಂದಿರವನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ತೆರಳಲು ಈಗಾಗಲೇ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಬೇಕಾದ ವಿಮಾನ ಸೇವೆ, ರೈಲು ಸೇವೆಗಳನ್ನು ಸರ್ಕಾರ ಆಯೋಜನೆ ಮಾಡಲು ಮುಂದಾಗಿದೆ.

ಈ ಕುರಿತು ಇದೀಗ ಕಾಂಗ್ರೆಸ್‌ ಮುಖಂಡ ಬಿ ಕೆ ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್‌ ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ, ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ, ಅದೊಂದು ರಾಜಕೀಯ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿಯಾಗಬೇಕಿತ್ತು, ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿಯ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಹೋಗುತ್ತಿದ್ದೆವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ಮೋದಿ, ಅಮಿತ್‌ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಇದು ರಾಜಕೀಯ ಕಾರ್ಯಕ್ರಮ ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ. ಅಯೋಧ್ಯೆ ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಇನ್ನು ನನಗೆ ಸಿದ್ದರಾಮಯ್ಯವರೇ ರಾಮ ಎಂದು ಹೆಚ್‌ ಆಂಜನೇಯ ನೀಡಿದ ಹೇಳಿಕೆ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌ ಎಲ್ಲರಿಗೂ ಭಕ್ತರಿರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago