Mysore
25
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ವಿನಯ್‌ ಕುಲಕರ್ಣಿ ಮನೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.

ಮನೆಯಲ್ಲಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ.

ಆರೋಪಿ ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದು, ಮಾಜಿ ಸಂಸದ ಡಿ.ಕೆ.ಸುರೇಶ್‌ ಹೆಸರಿನಲ್ಲಿ ವಂಚನೆ ಎಸಗಿದ್ದರು ಎಂಬ ಆರೋಪ ಕೇಳಿಬಂದಿದೆ.

Tags:
error: Content is protected !!