ರಾಜ್ಯ

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್) 240 ರೂ. ಏರಿಕೆಯಾಗಿದ್ದು, ಒಟ್ಟಾರೆಯಾಗಿ 13,855 ರೂ.ಗೆ ತಲುಪಿದೆ. ನಿನ್ನೆ ಕೂಡ 197 ರೂ. ಏರಿಕೆಯಾಗಿತ್ತು.

22 ಕ್ಯಾರೆಟ್‍ನ ಚಿನ್ನ ಪ್ರತಿ ಗ್ರಾಂ.ಗೆ 220 ರೂ. ಏರಿಕೆಯಾಗಿದ್ದು, ಇಂದು 12,700 ರೂ.ಗೆ ತಲುಪಿದೆ.ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಚಿನ್ನದ ಧಾರಣೆ ಇಂದು ಸಾರ್ವಕಾಲಿಕ ದಾಖಲೆ ಬರೆದಿದೆ.

ಹೂಡಿಕೆದಾರರು ಹೆಚ್ಚಾಗಿ ಚಿನ್ನದ ಮೇಲೆ ಬಂಡವಾಳ ಹೂಡುತ್ತಿರುವುದು ಹಾಗೂ ವಿವಿಧ ರಾಷ್ಟ್ರಗಳು ಕೇಂದ್ರೀಯ ಬ್ಯಾಂಕ್‍ಗಳು ಹೆಚ್ಚಾಗಿ ಚಿನ್ನ ಖರೀದಿಸುತ್ತಿರುವುದು ಬೆಲೆ ಏರಿಕೆಗೆ ಕಾರಣ ಎಂಬ ವ್ಯಾಖ್ಯಾನ ಮಾಡಲಾಗುತ್ತಿದೆ. ಜೊತೆಗೆ ಆಭರಣ ಪ್ರಿಯರು ಕೂಡ ಬೆಲೆ ಏರಿಕೆಯಾದರೂ ಖರೀದಿ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಹೀಗಾಗಿ ಚಿನ್ನದ ಧಾರಣೆ ನಿರಂತರವಾಗಿ ಏರಿಕೆಯತ್ತಲೇ ಸಾಗುತ್ತಿದೆ.

ಇದನ್ನು ಓದಿ: ಭಾರತದಲ್ಲಿ ಚಿನ್ನದ ಬೆಲೆ ಏರಿಕೆ

ಚಿನ್ನದಂತೆಯೇ ಬೆಳ್ಳಿ ಧಾರಣೆಯೂ ನಿರಂತರ ಬೆಲೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 2 ಪಟ್ಟು ಹೆಚ್ಚಾಗಿದೆ. ಇಂದು ಪ್ರತೀ ಗ್ರಾಂ ಬೆಳ್ಳಿಗೆ 4 ರೂ. ಹೆಚ್ಚಳವಾಗಿದ್ದು, 223 ರೂ.ಗೆ ತಲುಪಿದೆ. ನಿನ್ನೆ ಕೂಡ 5 ರೂ.ನಷ್ಟು ಹೆಚ್ಚಳವಾಗಿತ್ತು.

ಚಿನ್ನದಂತೆಯೇ ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಬೆಳ್ಳಿಯ ಧಾರಣೆ ಈಗಾಗಲೇ ಪ್ರತೀ ಕೆಜಿಗೆ 2 ಲಕ್ಷ ರೂ. ಗಡಿ ದಾಟಿದ್ದು, ಪ್ರಸ್ತುತ 2,23,000 ರೂ.ಗೆ ತಲುಪಿದ್ದು, ಗ್ರಾಹಕರು ಹುಬ್ಬೆರಿಸುವಂತೆ ಮಾಡಿದೆ.

ಚಿನ್ನದ ಆಭರಣಗಳು ದುಬಾರಿಯಾದ ಹಿನ್ನಲೆಯಲ್ಲಿ ಆಭರಣ ಪ್ರಿಯರು ಚಿನ್ನಲೇಪಿತ ಬೆಳ್ಳಿಯ ಆಭರಣಗಳಿಗೆ ಮೊರೆ ಹೋಗುತ್ತಿರುವುದು ಬೆಳ್ಳಿಯ ಧಾರಣೆ ಹೆಚ್ಚಾಗಲು ಒಂದು ಕಾರಣವಾದರೆ ಎಲೆಕ್ಟ್ರಿಕಲ್ ವಾಹನಗಳ ಉತ್ಪಾದನೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಮತ್ತೊಂದು ಕಾರಣವಾಗಿದೆ. ಎಲೆಕ್ಟ್ರಿಕಲ್ ವಾಹನಗಳ ತಯಾರಿಕೆ ಸಂದರ್ಭದಲ್ಲಿ ಬೆಳ್ಳಿಯನ್ನು ಬಳಸಲಾಗುತ್ತಿದೆ. ಹೀಗಾಗಿ ಬೆಳ್ಳಿಗೂ ಎಲ್ಲಿಲ್ಲದ ಬೇಡಿಕೆ ಕಂಡುಬಂದಿದೆ ಎಂದು ವರ್ತಕರು ಅಭಿಪ್ರಾಯಪಟ್ಟಿದ್ದಾರೆ.

ವರ್ತಕರ ಅಂದಾಜಿನ ಪ್ರಕಾರ, ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಯುವ ಸೂಚನೆಗಳಿಲ್ಲ. ಏರುಗತಿಯಲ್ಲೇ ಬೆಲೆಗಳು ಮುಂದುವರೆಯುವ ಸಾಧ್ಯತೆ ಹೆಚ್ಚಾಗಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

3 hours ago