ರಾಜ್ಯ

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್) 240 ರೂ. ಏರಿಕೆಯಾಗಿದ್ದು, ಒಟ್ಟಾರೆಯಾಗಿ 13,855 ರೂ.ಗೆ ತಲುಪಿದೆ. ನಿನ್ನೆ ಕೂಡ 197 ರೂ. ಏರಿಕೆಯಾಗಿತ್ತು.

22 ಕ್ಯಾರೆಟ್‍ನ ಚಿನ್ನ ಪ್ರತಿ ಗ್ರಾಂ.ಗೆ 220 ರೂ. ಏರಿಕೆಯಾಗಿದ್ದು, ಇಂದು 12,700 ರೂ.ಗೆ ತಲುಪಿದೆ.ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಚಿನ್ನದ ಧಾರಣೆ ಇಂದು ಸಾರ್ವಕಾಲಿಕ ದಾಖಲೆ ಬರೆದಿದೆ.

ಹೂಡಿಕೆದಾರರು ಹೆಚ್ಚಾಗಿ ಚಿನ್ನದ ಮೇಲೆ ಬಂಡವಾಳ ಹೂಡುತ್ತಿರುವುದು ಹಾಗೂ ವಿವಿಧ ರಾಷ್ಟ್ರಗಳು ಕೇಂದ್ರೀಯ ಬ್ಯಾಂಕ್‍ಗಳು ಹೆಚ್ಚಾಗಿ ಚಿನ್ನ ಖರೀದಿಸುತ್ತಿರುವುದು ಬೆಲೆ ಏರಿಕೆಗೆ ಕಾರಣ ಎಂಬ ವ್ಯಾಖ್ಯಾನ ಮಾಡಲಾಗುತ್ತಿದೆ. ಜೊತೆಗೆ ಆಭರಣ ಪ್ರಿಯರು ಕೂಡ ಬೆಲೆ ಏರಿಕೆಯಾದರೂ ಖರೀದಿ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಹೀಗಾಗಿ ಚಿನ್ನದ ಧಾರಣೆ ನಿರಂತರವಾಗಿ ಏರಿಕೆಯತ್ತಲೇ ಸಾಗುತ್ತಿದೆ.

ಇದನ್ನು ಓದಿ: ಭಾರತದಲ್ಲಿ ಚಿನ್ನದ ಬೆಲೆ ಏರಿಕೆ

ಚಿನ್ನದಂತೆಯೇ ಬೆಳ್ಳಿ ಧಾರಣೆಯೂ ನಿರಂತರ ಬೆಲೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 2 ಪಟ್ಟು ಹೆಚ್ಚಾಗಿದೆ. ಇಂದು ಪ್ರತೀ ಗ್ರಾಂ ಬೆಳ್ಳಿಗೆ 4 ರೂ. ಹೆಚ್ಚಳವಾಗಿದ್ದು, 223 ರೂ.ಗೆ ತಲುಪಿದೆ. ನಿನ್ನೆ ಕೂಡ 5 ರೂ.ನಷ್ಟು ಹೆಚ್ಚಳವಾಗಿತ್ತು.

ಚಿನ್ನದಂತೆಯೇ ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಬೆಳ್ಳಿಯ ಧಾರಣೆ ಈಗಾಗಲೇ ಪ್ರತೀ ಕೆಜಿಗೆ 2 ಲಕ್ಷ ರೂ. ಗಡಿ ದಾಟಿದ್ದು, ಪ್ರಸ್ತುತ 2,23,000 ರೂ.ಗೆ ತಲುಪಿದ್ದು, ಗ್ರಾಹಕರು ಹುಬ್ಬೆರಿಸುವಂತೆ ಮಾಡಿದೆ.

ಚಿನ್ನದ ಆಭರಣಗಳು ದುಬಾರಿಯಾದ ಹಿನ್ನಲೆಯಲ್ಲಿ ಆಭರಣ ಪ್ರಿಯರು ಚಿನ್ನಲೇಪಿತ ಬೆಳ್ಳಿಯ ಆಭರಣಗಳಿಗೆ ಮೊರೆ ಹೋಗುತ್ತಿರುವುದು ಬೆಳ್ಳಿಯ ಧಾರಣೆ ಹೆಚ್ಚಾಗಲು ಒಂದು ಕಾರಣವಾದರೆ ಎಲೆಕ್ಟ್ರಿಕಲ್ ವಾಹನಗಳ ಉತ್ಪಾದನೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಮತ್ತೊಂದು ಕಾರಣವಾಗಿದೆ. ಎಲೆಕ್ಟ್ರಿಕಲ್ ವಾಹನಗಳ ತಯಾರಿಕೆ ಸಂದರ್ಭದಲ್ಲಿ ಬೆಳ್ಳಿಯನ್ನು ಬಳಸಲಾಗುತ್ತಿದೆ. ಹೀಗಾಗಿ ಬೆಳ್ಳಿಗೂ ಎಲ್ಲಿಲ್ಲದ ಬೇಡಿಕೆ ಕಂಡುಬಂದಿದೆ ಎಂದು ವರ್ತಕರು ಅಭಿಪ್ರಾಯಪಟ್ಟಿದ್ದಾರೆ.

ವರ್ತಕರ ಅಂದಾಜಿನ ಪ್ರಕಾರ, ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಯುವ ಸೂಚನೆಗಳಿಲ್ಲ. ಏರುಗತಿಯಲ್ಲೇ ಬೆಲೆಗಳು ಮುಂದುವರೆಯುವ ಸಾಧ್ಯತೆ ಹೆಚ್ಚಾಗಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

12 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

12 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

12 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

12 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

12 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

12 hours ago