ರಾಜ್ಯ

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್) 240 ರೂ. ಏರಿಕೆಯಾಗಿದ್ದು, ಒಟ್ಟಾರೆಯಾಗಿ 13,855 ರೂ.ಗೆ ತಲುಪಿದೆ. ನಿನ್ನೆ ಕೂಡ 197 ರೂ. ಏರಿಕೆಯಾಗಿತ್ತು.

22 ಕ್ಯಾರೆಟ್‍ನ ಚಿನ್ನ ಪ್ರತಿ ಗ್ರಾಂ.ಗೆ 220 ರೂ. ಏರಿಕೆಯಾಗಿದ್ದು, ಇಂದು 12,700 ರೂ.ಗೆ ತಲುಪಿದೆ.ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಚಿನ್ನದ ಧಾರಣೆ ಇಂದು ಸಾರ್ವಕಾಲಿಕ ದಾಖಲೆ ಬರೆದಿದೆ.

ಹೂಡಿಕೆದಾರರು ಹೆಚ್ಚಾಗಿ ಚಿನ್ನದ ಮೇಲೆ ಬಂಡವಾಳ ಹೂಡುತ್ತಿರುವುದು ಹಾಗೂ ವಿವಿಧ ರಾಷ್ಟ್ರಗಳು ಕೇಂದ್ರೀಯ ಬ್ಯಾಂಕ್‍ಗಳು ಹೆಚ್ಚಾಗಿ ಚಿನ್ನ ಖರೀದಿಸುತ್ತಿರುವುದು ಬೆಲೆ ಏರಿಕೆಗೆ ಕಾರಣ ಎಂಬ ವ್ಯಾಖ್ಯಾನ ಮಾಡಲಾಗುತ್ತಿದೆ. ಜೊತೆಗೆ ಆಭರಣ ಪ್ರಿಯರು ಕೂಡ ಬೆಲೆ ಏರಿಕೆಯಾದರೂ ಖರೀದಿ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಹೀಗಾಗಿ ಚಿನ್ನದ ಧಾರಣೆ ನಿರಂತರವಾಗಿ ಏರಿಕೆಯತ್ತಲೇ ಸಾಗುತ್ತಿದೆ.

ಇದನ್ನು ಓದಿ: ಭಾರತದಲ್ಲಿ ಚಿನ್ನದ ಬೆಲೆ ಏರಿಕೆ

ಚಿನ್ನದಂತೆಯೇ ಬೆಳ್ಳಿ ಧಾರಣೆಯೂ ನಿರಂತರ ಬೆಲೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 2 ಪಟ್ಟು ಹೆಚ್ಚಾಗಿದೆ. ಇಂದು ಪ್ರತೀ ಗ್ರಾಂ ಬೆಳ್ಳಿಗೆ 4 ರೂ. ಹೆಚ್ಚಳವಾಗಿದ್ದು, 223 ರೂ.ಗೆ ತಲುಪಿದೆ. ನಿನ್ನೆ ಕೂಡ 5 ರೂ.ನಷ್ಟು ಹೆಚ್ಚಳವಾಗಿತ್ತು.

ಚಿನ್ನದಂತೆಯೇ ಡಿಸೆಂಬರ್ ತಿಂಗಳ ಆರಂಭದಿಂದಲೂ ಏರಿಳಿತವಾಗುತ್ತಿದ್ದ ಬೆಳ್ಳಿಯ ಧಾರಣೆ ಈಗಾಗಲೇ ಪ್ರತೀ ಕೆಜಿಗೆ 2 ಲಕ್ಷ ರೂ. ಗಡಿ ದಾಟಿದ್ದು, ಪ್ರಸ್ತುತ 2,23,000 ರೂ.ಗೆ ತಲುಪಿದ್ದು, ಗ್ರಾಹಕರು ಹುಬ್ಬೆರಿಸುವಂತೆ ಮಾಡಿದೆ.

ಚಿನ್ನದ ಆಭರಣಗಳು ದುಬಾರಿಯಾದ ಹಿನ್ನಲೆಯಲ್ಲಿ ಆಭರಣ ಪ್ರಿಯರು ಚಿನ್ನಲೇಪಿತ ಬೆಳ್ಳಿಯ ಆಭರಣಗಳಿಗೆ ಮೊರೆ ಹೋಗುತ್ತಿರುವುದು ಬೆಳ್ಳಿಯ ಧಾರಣೆ ಹೆಚ್ಚಾಗಲು ಒಂದು ಕಾರಣವಾದರೆ ಎಲೆಕ್ಟ್ರಿಕಲ್ ವಾಹನಗಳ ಉತ್ಪಾದನೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಮತ್ತೊಂದು ಕಾರಣವಾಗಿದೆ. ಎಲೆಕ್ಟ್ರಿಕಲ್ ವಾಹನಗಳ ತಯಾರಿಕೆ ಸಂದರ್ಭದಲ್ಲಿ ಬೆಳ್ಳಿಯನ್ನು ಬಳಸಲಾಗುತ್ತಿದೆ. ಹೀಗಾಗಿ ಬೆಳ್ಳಿಗೂ ಎಲ್ಲಿಲ್ಲದ ಬೇಡಿಕೆ ಕಂಡುಬಂದಿದೆ ಎಂದು ವರ್ತಕರು ಅಭಿಪ್ರಾಯಪಟ್ಟಿದ್ದಾರೆ.

ವರ್ತಕರ ಅಂದಾಜಿನ ಪ್ರಕಾರ, ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಯುವ ಸೂಚನೆಗಳಿಲ್ಲ. ಏರುಗತಿಯಲ್ಲೇ ಬೆಲೆಗಳು ಮುಂದುವರೆಯುವ ಸಾಧ್ಯತೆ ಹೆಚ್ಚಾಗಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಮನೆಯ ಮಂಚದ ಕೆಳಗೆ ಚಿರತೆ ಪ್ರಕ್ಷತ್ಯ, ಆತಂಕಕ್ಕೀಡಾದ ಮನೆಮಂದಿ

ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…

23 mins ago

ಚಾರಣಿಗರ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…

1 hour ago

ಅಮೆರಿಕ-ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಸಿದ್ಧತೆ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…

1 hour ago

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

3 hours ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

4 hours ago