Actress Rany Rao
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ನೀಡಿದೆ.
60 ದಿನ ಕಳೆದರೂ ಡಿಆರ್ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರಿಗೂ ಶ್ಯೂರಿಟಿ, 2 ಲಕ್ಷ ರೂ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ದೇಶ ಬಿಟ್ಟು ಹೋಗದಂತೆ ಸೂಚನೆ ನೀಡಲಾಗಿದೆ.
12 ಕೋಟಿ ರೂ ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದರು. ಈ ಹಿಂದೆ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕಾರ ಮಾಡಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…