ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಂಧನವಾಗಿದೆ. ಡಿಆರ್ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಅಧಿಕಾರಿಗಳು ನಟಿಯನ್ನು ಬಂಧಿಸಿದ್ದು, ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ವಿದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ನಟಿ, ಚಿನ್ನ ಕಳ್ಳಸಾಗಣಿಕೆ ಕೇಸ್ನಲ್ಲಿ ಸಿಕ್ಕಿಹಾಕಿಹೊಂಡಿದ್ದಾರೆ. ಈ ನಡುವೆ ಖ್ಯಾತ ರಾಜಕಾರಣಿಯೊಬ್ಬರ ಹೆಸರು ಕೂಡು ಕೇಸ್ನಲ್ಲಿ ತುಳುಕುಹಾಕಿಕೊಂಡಿದ್ದು, ಆ ರಾಜಕಾರಣಿಗೆ ನೀಡುವುದಕ್ಕಾಗಿಯೇ ನಟಿ ಚಿನ್ನ ಖರೀದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯ ತನಿಖಾ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ರಾಜಕಾರಣಿಯ ಬೆನ್ನು ಬೀಳಲು ಸಿದ್ಧತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ನಟಿ ರನ್ಯಾ ರಾವ್ ಅವರು, ಅಧಿಕಾರಿಗಳಿಗೆ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರನ್ನು ಹರ್ಷವರ್ಧಿನಿ ರನ್ಯಾ, ಉದ್ಯಮಿ ಕೆ.ಎಸ್ ಹೆಗ್ದೇಶ್ ಅವರ ಪುತ್ರಿ ಎಂದು ಉಲ್ಲೇಖಿಸಿದ್ದಾರೆ.
ದ್ವಿತೀಯ ಪಿಯುಸಿವರೆಗೂ ಓದಿದ್ದು, ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಜತೆಗೆ ವನ್ಯಜೀವಿ ಛಾಯಾಗ್ರಾಹಕಿ. ದುಬೈನಲ್ಲಿ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದೇನೆ. ವಾಸ್ತುಶಿಲ್ಪಿ ಜತಿನ್ ಹುಕ್ಕೇರಿ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿದ್ದೇವೆ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…