ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ನಟಿ ರನ್ಯಾ ರಾವ್‌ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ರನ್ಯಾ ರಾವ್‌ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್‌.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ ಪ್ರಯಾಣಿಕರನ್ನು ತಪಾಸಣೆ ಮಾಡುವಂತೆ ಇವರನ್ನು ತಪಾಸಣೆ ಮಾಡುವಾಗ ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಪತ್ತೆಯಾಗಿದೆ. ಹೀಗಾಗಿ ರನ್ಯಾ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಇನ್ನು ರನ್ಯಾ ಅವರು ವಿದೇಶದಿಂದ 14.8 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಐಪಿಎಸ್‌ ಅಧಿಕಾರಿಯ ಪುತ್ರಿಯಾಗಿದ್ದು, ಕಿಚ್ಚ ಸುದೀಪ ಹಾಗೂ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರೊಂದಿಗೆ ಸ್ಕ್ರೀನ್‌ ಶೇರ್‌ ಮಾಡಿಕೊಂಡಿದ್ದರು.

ವಿಮಾನ ನಿಲ್ದಾಣದಲ್ಲಿ ಗ್ರೀನ್‌ಫಿಲ್ಡ್‌ ಕಾರ್ಗೋ

ರಾಷ್ಟ್ರದಲ್ಲಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆ ಪೂರೈಸುವ ಉದ್ದೇಶದಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ದೇಶದಲ್ಲೇ ದೊಡ್ಡ ಗ್ರೀನ್‌ಫೀಲ್ಡ್‌ ದೇಶೀಯ ಕಾರ್ಗೋ ಟರ್ಮಿನಲ್‌ ಅನ್ನು ಆರಂಭಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ಮೆನ್ಜೀಸ್‌ ಏವಿಯೇಷನ್‌ ಸಹಯೋಗದಲ್ಲಿ ನಿರ್ಮಾಣವಾಗಿರುವ ಕಾರ್ಗೋ ಟರ್ಮಿನಲ್‌ 2 ಲಕ್ಷದ 45 ಸಾವಿರ ಚದರ ಅಡಿ ವಿಸ್ತೀರ್ಣ ಒಳಗೊಂಡಿದೆ. ಇದು ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆಯನ್ನು ಬಲಪಡಿಸುವುದಲ್ಲದೇ, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಸುಸ್ಥಿರತೆ ಸಾಧಿಸುತ್ತದೆ.

ಅರ್ಚನ ಎಸ್‌ ಎಸ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

27 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

48 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago