ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ರನ್ಯಾ ರಾವ್ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ ಪ್ರಯಾಣಿಕರನ್ನು ತಪಾಸಣೆ ಮಾಡುವಂತೆ ಇವರನ್ನು ತಪಾಸಣೆ ಮಾಡುವಾಗ ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಪತ್ತೆಯಾಗಿದೆ. ಹೀಗಾಗಿ ರನ್ಯಾ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಇನ್ನು ರನ್ಯಾ ಅವರು ವಿದೇಶದಿಂದ 14.8 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಐಪಿಎಸ್ ಅಧಿಕಾರಿಯ ಪುತ್ರಿಯಾಗಿದ್ದು, ಕಿಚ್ಚ ಸುದೀಪ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದರು.
ವಿಮಾನ ನಿಲ್ದಾಣದಲ್ಲಿ ಗ್ರೀನ್ಫಿಲ್ಡ್ ಕಾರ್ಗೋ
ರಾಷ್ಟ್ರದಲ್ಲಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆ ಪೂರೈಸುವ ಉದ್ದೇಶದಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ದೇಶದಲ್ಲೇ ದೊಡ್ಡ ಗ್ರೀನ್ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್ ಅನ್ನು ಆರಂಭಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ಮೆನ್ಜೀಸ್ ಏವಿಯೇಷನ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕಾರ್ಗೋ ಟರ್ಮಿನಲ್ 2 ಲಕ್ಷದ 45 ಸಾವಿರ ಚದರ ಅಡಿ ವಿಸ್ತೀರ್ಣ ಒಳಗೊಂಡಿದೆ. ಇದು ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆಯನ್ನು ಬಲಪಡಿಸುವುದಲ್ಲದೇ, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಸುಸ್ಥಿರತೆ ಸಾಧಿಸುತ್ತದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…